ಪ್ರಸ್ತುತ ಅಭಿವೃದ್ಧಿ ಕಾರ್ಯಗಳು
ರಾಜ್ಯದಲ್ಲಿ ಪ್ರಸ್ತುತ ಶಂಕಿತ ಪಡಿತರ ಚೀಟಿಗಳನ್ನು ಬಿ.ಪಿ.ಎಲ್ ನಿಂದ ಎ.ಪಿ.ಎಲ್ ಗೆ ಬದಲಾವಣೆ ಮಾಡುತ್ತಿರುವುದರಿಂದ ಅರ್ಹ ಬಿ.ಪಿ.ಎಲ್ ಕಾರ್ಡ್ ದಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರ ಗಮನ ಸೆಳೆಯಲಾಯಿತು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಭದ್ರಾ ಕಾಡಾ ದ ಸಹಯೋಗದಲ್ಲಿ ಸವಳು-ಜಂಗು ಮಣ್ಣಿನ ಪುನರುಜ್ಜೀವನ ಹಾಗೂ ಫಲವತ್ತತೆಯನ್ನು ಹೆಚ್ಚಿಸಲು "ಮಣ್ಣಿಗೆ ನವಚೇತನ - ರೈತರಿಗೆ ಆಶಾಕಿರಣ" ಕಾರ್ಯಕ್ರಮವನ್ನು ರಾಜ್ಯದ ಇತರೆ ಅಚ್ಚುಕಟ್ಟು ಪ್ರದೇಶಗಳಿಗೂ ವಿಸ್ತರಿಸುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರ ಗಮನ ಸೆಳೆಯಲಾಯಿತು
ರಾಜ್ಯದಲ್ಲಿ ರೈತರ ಜಮೀನುಗಳಲ್ಲಿ ಮೊಬೈಲ್ ಆಪ್ ಮೂಲಕ ಪ್ರಸ್ತುತ ಕೈಗೊಳ್ಳಲಾಗಿರುವ ಬೆಳೆ ಸಮೀಕ್ಷೆ ಹಾಗೂ ಅದರ ಲೋಪದೋಷಗಳ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲಾಯಿತು...
ತರೀಕೆರೆ ತಾಲ್ಲೂಕು ನಂದಿಹೊಸಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 66/11kv ವಿದ್ಯುತ್ ಉಪ ಕೇಂದ್ರದ ಉದ್ಘಾಟನೆ
ತರೀಕೆರೆ ತಾಲ್ಲೂಕು ಅಮೃತಾಪುರ ಹೋಬಳಿಯ ಯರೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುವ 110/11 kv ವಿದ್ಯುತ್ ವಿತರಣಾ ಉಪಕೇಂದ್ರದ ನಿರ್ಮಾಣಕ್ಕೆ ಇಂದು ಮಾನ್ಯ ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಕೆ.ಜೆ ಜಾರ್ಜ್ ರವರ ಜೊತೆಗೂಡಿ ಶಂಕುಸ್ಥಾಪನೆ ನೆರವೇರಿಸಲಾಯಿತು.
ತರೀಕೆರೆ ತಾಲೂಕು ಹೊಸ ಮನೆ ಗೇಟ್ ನಲ್ಲಿ ನೂತನವಾಗಿ ನಿರ್ಮಿಸಿದ್ದ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಸಂದರ್ಭ...


ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಶಕ್ತಿ ಭವನದಲ್ಲಿ ಭೇಟಿಯಾಗಿ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು
ಮುಡುಗೋಡು ಗ್ರಾಮ ಪಂಚಾಯಿತಿ 2025-26ನೇ ಸಾಲಿನ ಶೇ. 25/ರಡಿ ಪ.ಜಾ & ಪ. ಪಂಗಡಗಳ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು
ತರೀಕೆರೆ ತಾಲ್ಲೂಕು ಹುಣಸನಹಳ್ಳಿ (ಎಂ. ಏನ್ ಕ್ಯಾಂಪ್) ಗ್ರಾಮದ 41 ಫಲಾನುಭವಿಗಳಿಗೆ 94.ಸಿ ಹಕ್ಕು ಪತ್ರಗಳನ್ನು ವಿತರಿಸಲಾಯಿತು
ದಿನಾಂಕ 28/10/2025 ರಂದು ನಡೆದ, ತರೀಕೆರೆ ತಾಲ್ಲೂಕು ಬಾವಿಕೆರೆ ಹತ್ತಿರ ನೂತನವಾಗಿ ನಿರ್ಮಿಸಿದ್ದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಉದ್ಘಾಟನೆ ಹಾಗೂ ಹೆಚ್ಚುವರಿ ಕೊಠಡಿಗಳ ಮತ್ತು ವರ್ಕ್ ಶಾಪ್ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂದರ್ಭ.
ದಿನಾಂಕ 28/10/2025 ರಂದು ನಡೆದ, ತರೀಕೆರೆ ತಾಲ್ಲೂಕು ಬಾವಿಕೆರೆ ಹತ್ತಿರ ನೂತನವಾಗಿ ನಿರ್ಮಿಸಿದ್ದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಉದ್ಘಾಟನೆ ಹಾಗೂ ಹೆಚ್ಚುವರಿ ಕೊಠಡಿಗಳ ಮತ್ತು ವರ್ಕ್ ಶಾಪ್ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾನ್ಯ ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ Dr MC Sudhakar ಅವರು ಸಭೆಯನ್ನುದ್ದೇಶಿಸಿ ಮಾತನಾಡಿದ ಸಂದರ್ಭ
ಅಜ್ಜಂಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮ / ಉಪಗ್ರಾಮ, 94 ಸಿ,ಪೋಡಿ ಮುಕ್ತ ಗ್ರಾಮ, ಸ್ವಾಮಿತ್ವ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರಗಳು/ದಾಖಲೆಗಳ ವಿತರಣೆ ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ
ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್ - 2 ರಲ್ಲಿ ಅಜ್ಜಂಪುರ ತಾಲ್ಲೂಕಿನ 20 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಹಾಗೂ ಹನಿ ನೀರಾವರಿ ಕಾಮಗಾರಿಯ ವೈಫಲ್ಯದ ಕುರಿತು ಸದನದಲ್ಲಿ ಪ್ರಸ್ತಾಪಿಸಲಾಯಿತು.
ವಿಧಾನಸೌಧದಲ್ಲಿ ನಡೆದ ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ- ಖಾತ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತು ನಮ್ಮ ನಾಯಕರಾದ DK Shivakumar ರವರ ಜೊತೆ ಪಾಲ್ಗೊಂಡು ಚಾಲನೆ ನೀಡಲಾಯಿತು.
ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ವಿಧೇಯಕದ ಬಗ್ಗೆ ಸದನದಲ್ಲಿ ಚರ್ಚಿಸಿದ ಕ್ಷಣ
ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್ - 2 ರಲ್ಲಿ ಅಜ್ಜಂಪುರ ತಾಲ್ಲೂಕಿನ 20 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಹಾಗೂ ಹನಿ ನೀರಾವರಿ ಕಾಮಗಾರಿಯ ವೈಫಲ್ಯದ ಕುರಿತು ಸದನದಲ್ಲಿ ಪ್ರಸ್ತಾಪಿಸಲಾಯಿತು.
ವಿಧಾನಸೌಧದಲ್ಲಿ ನಡೆದ ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ- ಖಾತ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತು ನಮ್ಮ ನಾಯಕರಾದ DK Shivakumar ರವರ ಜೊತೆ ಪಾಲ್ಗೊಂಡು ಚಾಲನೆ ನೀಡಲಾಯಿತು.
ತರೀಕೆರೆ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ - 69 ರ ಸರಪಳಿ 169.88 ರಿಂದ 172.38 ಕಿ.ಮೀ. ವರೆಗೆ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿ ಹಾಗೂ ತರೀಕೆರೆ ಪುರಸಭೆ ವ್ಯಾಪ್ತಿಯ ಬಿ. ಹೆಚ್ ರಸ್ತೆ ಪಾದಚಾರಿ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
ಗ್ರಾಮ ಪಂಚಾಯಿತಿ ಹಲಸೂರು, ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಇಂದು ಹಲಸೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸವಳು - ಜವಳು ಕಾರ್ಯಕ್ರಮದಡಿ ಅಂತರ್ಗತ ಬಸಿಕಾಲುವೆ ಕಾಮಗಾರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ..
ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಅವಶ್ಯವಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳು ಹಾಗೂ ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಕುರಿತು ಜಲ ಶಕ್ತಿ ಹಾಗೂ ರೈಲ್ವೆ ಇಲಾಖೆಯ ಕೇಂದ್ರ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ.ಸೋಮಣ್ಣ ರವರ ಜೊತೆ ಚರ್ಚೆ
ತರೀಕೆರೆ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ಪ್ರವಾಸಿ ತಾಣಗಳಾದ ಕೆಮ್ಮಣ್ಣುಗುಂಡಿಯ ಕೃಷ್ಣರಾಜೇಂದ್ರ ಗಿರಿಧಾಮ ಹಾಗೂ ಕಲ್ಲತ್ತಿಗಿರಿ ಅಭಿವೃದ್ಧಿಗೆ ಕಾಯಕಲ್ಪ
ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವ ಯೋಜನೆ
ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಹುರುವನಹಳ್ಳಿ ಗ್ರಾಮದಿಂದ ಗೌಳಿಗರ ಕ್ಯಾಂಪ್ ಮಾರ್ಗವಾಗಿ ಗುಡ್ಡದ ಬೀರನಹಳ್ಳಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ
50ಕ್ಕೂ ಹೆಚ್ಚು ಸಂದ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಾಗಿದೆ
ಹಾದಿಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯತಿಯ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
ನಗರ ಭೂಸಾರಿಗೆ( DULT) ಅನುದಾನದಡಿ ನಿರ್ಮಿಸಲಾಗುವ ಉದ್ದೇಶಿತ ತರೀಕೆರೆ KSRTC ಬಸ್ ನಿಲ್ದಾಣದ ಮಾದರಿ ವಿನ್ಯಾಸ..
ಅಜ್ಜಂಪುರ ತಾಲ್ಲೂಕಿನ ಗಡೀಹಳ್ಳಿ ಮತ್ತು ಬಂಡ್ರೆ ಗ್ರಾಮದ ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ಗಂಗಾ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು
ಮುಖ್ಯಮಂತ್ರಿ ಪರಿಹಾರ ನಿಧಿ ಯೋಜನೆ ಅಡಿ 17ಕ್ಕೂ ಹೆಚ್ಚು ಫಲಾನುಭವಿಗಳಿಗೆ ಒಟ್ಟಾರೆ ₹500000 ಕ್ಕೂ ಅಧಿಕ ಧನಸಹಾಯ ಮಾಡಲಾಗಿದೆ
ಭದ್ರಾವತಿ - ಲಕ್ಕವಳ್ಳಿ ವರೆಗೂ ಸರ್ಕಾರಿ ಬಸ್ ಸಂಚಾರ ಪ್ರಾರಂಭ
ತರೀಕೆರೆ ಪಟ್ಟಣದ ವಾರ್ಡ್ ನಂ:-18 ರ ಆಶ್ರಯ ಬಡಾವಣೆಯಲ್ಲಿ ನಡೆದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ
ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 50ಕ್ಕೂ ಹೆಚ್ಚು ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್ 1&2ರಡಿಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲು ಚಾಲನೆ ನೀಡಲಾಯಿತು.
ತರೀಕೆರೆ ಪಟ್ಟಣದ ವಾರ್ಡ್ ನಂ:-13 ರ ಸುಂದರೇಶ್ ಬಡಾವಣೆಯಲ್ಲಿ ನಡೆದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಅಗ್ನಿ ಶಾಮಕ ವಾಹನದ ಸಮಸ್ಯೆ ಕುರಿತಂತೆ ಹಾಗೂ ಅಜ್ಜಂಪುರ ತಾಲ್ಲೂಕಿಗೆ ಹೊಸದಾಗಿ ಅಗ್ನಿ ಶಾಮಕ ಠಾಣೆಯನ್ನು ಮಂಜೂರಾತಿ ಮಾಡುವ ಬಗ್ಗೆ
ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಹೋಬಳಿ ಗೋಪಾಲ ಗ್ರಾಮದ ಮುಖ್ಯ ರಸ್ತೆಯಿಂದ ಕರಕುಚ್ಚಿ ಗ್ರಾಮವನ್ನು ಸಂಪರ್ಕಿಸುವ ಒಂದು ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ಅವರೊಂದಿಗೆ ತರೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ e-ಸ್ವತ್ತು ಸಮಸ್ಯೆಗಳ ಕುರಿತಂತೆ ಮಾತನಾಡಲಾಯಿತು
ಭದ್ರಾ ಮೇಲ್ದಂಡೆ ಚಾನಲ್ ಬ್ರಿಡ್ಜ್ ನಿಂದ ಗುರುಪುರ ಸಂಪರ್ಕಿಸುವ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ( ಅಂದಾಜು ಮೊತ್ತ 100 ಲಕ್ಷ ರೂ) ಗುದ್ದಲಿ ಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಜನರನ್ನು ನೇರವಾಗಿ ಭೇಟಿ ಮಾಡಲು, ಅವರ ಕುಂದು-ಕೊರತೆಗಳನ್ನು ಆಲಿಸಲು ಸಹಾಯಕವಾಗುವಂತಹ ಸುಸಜ್ಜಿತವಾದ "ಶಾಸಕರ ಜನ ಸಂಪರ್ಕ ಕಚೇರಿ' ತೆರೆಯಲಾಗಿದೆ.
ತರೀಕೆರೆ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ "2024-25ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ" ಅನುದಾನ ಬಿಡುಗಡೆ ಮಾಡಲಾಗಿದೆ
